Tuesday, 29 October 2019

ಅಂಜಿಕಿನ್ಯಾತಕಯ್ಯಾ ಸಜ್ಜನರಿಗೆ

ಅಂಜಿಕಿನ್ಯಾತಕಯ್ಯಾ ಸಜ್ಜನರಿಗೆ
ಭಯವು ಇನ್ಯಾತಾಕಯ್ಯಾ ।।

ಸಂಜೀವರಾಯರ ಸ್ಮರಣೆ ಮಾಡಿದ ಮೇಲೆ ।

ಕನಸಿಲಿ ಮನಸಿಲಿ ಕಳವಳವಾದರೆ
ಹನುಮನ ನೆನೆದರೆ ಹಾರಿಹೋಗದೆ ಪಾಪ ।।

ರೋಮ ರೋಮಕೆ ಕೋಟಿ ಲಿಂಗವುದುರಿಸಿದ
ಭೀಮನ ನೆನೆದರೆ ಬಿಟ್ಟು ಹೋಗದೆ ಭೀತಿ ।।

ಪುರಂದರವಿಠಲ್ಲನ್ನ ಪೂಜೆಯ ಮಾಡುವ
ಗುರು ಮಧ್ವರಾಯರ ಸ್ಮರಣೆ ಮಾಡಿದ ಮೇಲೆ ।।

No comments:

Post a Comment