ಕಂಗಳಿದ್ಯಾತಕೋ ಕಾವೇರಿರಂಗನ ನೋಡದ ।।
ಜಗಂಗಳೊಳಗೆ ಮಂಗಳ ಮೂರುತಿ
ರಂಗನ ಶ್ರೀ ಪಾದಂಗಳ ನೋಡದ ।।
ಎಂದಿಗಾದರೊಮ್ಮೆ ಜನರು
ಬಂದು ಭೂಮಿಯಲ್ಲಿ ನಿಂದು
ಚಂದ್ರ ಪುಷ್ಕರಣಿ ಸ್ನಾನವ ಮಾಡಿ
ಆನಂದದಿಂದಲಿ ರಂಗನ ನೋಡದ ।।
ಹರಿಪಾದೋದಕ ಸಮ ಕಾವೇರಿ
ವಿರಜಾನದಿಲಿ ಸ್ನಾನವ ಮಾಡಿ
ಪರಮ ವೈಕುಂಠ ರಂಗ ಮಂದಿರ
ಪರವಾಸುದೇವನ ನೋಡದ ।।
ಹಾರ ಹೀರ ವೈಜಯಂತಿ
ತೋರ ಮುತ್ತಿನ ಹಾರ ಪದಕ
ತೇರನೇರಿ ಬೀದಿಲಿ ಬರುವ
ರಂಗವಿಠಲ ರಾಯನ ನೋಡದ ।।
ಜಗಂಗಳೊಳಗೆ ಮಂಗಳ ಮೂರುತಿ
ರಂಗನ ಶ್ರೀ ಪಾದಂಗಳ ನೋಡದ ।।
ಎಂದಿಗಾದರೊಮ್ಮೆ ಜನರು
ಬಂದು ಭೂಮಿಯಲ್ಲಿ ನಿಂದು
ಚಂದ್ರ ಪುಷ್ಕರಣಿ ಸ್ನಾನವ ಮಾಡಿ
ಆನಂದದಿಂದಲಿ ರಂಗನ ನೋಡದ ।।
ಹರಿಪಾದೋದಕ ಸಮ ಕಾವೇರಿ
ವಿರಜಾನದಿಲಿ ಸ್ನಾನವ ಮಾಡಿ
ಪರಮ ವೈಕುಂಠ ರಂಗ ಮಂದಿರ
ಪರವಾಸುದೇವನ ನೋಡದ ।।
ಹಾರ ಹೀರ ವೈಜಯಂತಿ
ತೋರ ಮುತ್ತಿನ ಹಾರ ಪದಕ
ತೇರನೇರಿ ಬೀದಿಲಿ ಬರುವ
ರಂಗವಿಠಲ ರಾಯನ ನೋಡದ ।।
No comments:
Post a Comment