ಸತ್ಯ ಜಗತಿದು ಪಂಚಭೇದವು ನಿತ್ಯ ಶ್ರೀ ಗೋವಿಂದನ
ಕೃತ್ಯವರಿದು ತಾರತಮ್ಯದಿ ಕೃಷ್ಣನಧಿಕೆಂದು ಸಾರಿರೈ ।।
ಜೀವ ಈಶಗೆ ಭೇದ ಸರ್ವತ್ರ ಜೀವ ಜೀವಕೆ ಭೇದವು
ಜೀವ ಜಡ ಜಡ ಜಡಕೆ ಭೇದ ಜೀವ ಜಡ ಪರಮಾತ್ಮಗೆ ।।
ಮಾನುಷೋತ್ತಮಗಧಿಪ ಕ್ಷಿತಿಪರು ಮನುಜ ದೇವ ಗಂಧರ್ವರು
ಜ್ಞಾನಪಿತ್ರಜಾನ ಕರ್ಮಜ ದಾನವಾರಿ ತತ್ವಾತ್ಮರು ।।
ಗಣಪಮಿತ್ರರು ಸಪ್ತಋಷಿಗಳು ವಹ್ನಿ ನಾರದ ವರುಣನು
ಇನಜಗೆ ಸಮ ಸೂರ್ಯ ಚಂದ್ರರು ಮನುಸುತೆಯು ಹೆಚ್ಚು ಪ್ರವಹನು ।।
ದಕ್ಷ ಸಮ ಅನಿರುದ್ಧ ಗುರು ಶಚಿ ರತಿಸ್ವಯಾ೦ಭುವರಾರ್ವರು
ಪಕ್ಷಪ್ರಾಣನಿಗಿಂತ ಕಾಮನು ಕಿಂಚಿದಧಿಕನು ಇಂದ್ರನು ।।
ದೇವೇಂದ್ರನಿಗಿಂತ ಅಧಿಕ ಮಹರುದ್ರ ದೇವ ಸಮ ಶೇಷ ಗರುಡರು
ಕೇವಲಧಿಕರು ಶೇಷಗರುಡಗೆ ದೇವಿ ಭಾರತಿ ಸರಸ್ವತಿ ।।
ವಾಯುವಿಗೆ ಸಮರಿಲ್ಲ ಜಗದೊಳು ವಾಯುದೇವರೆ ಬ್ರಹ್ಮರು
ವಾಯು ಬ್ರಹ್ಮಗೆ ಕೋಟಿ ಗುಣದಿಂದ ಅಧಿಕಶಕ್ತಳು ಶ್ರೀ ರಮಾ ।।
ಅನಂತ ಗುಣದಿ೦ ಲಕುಮಿಗಧಿಕನು ಶ್ರೀಪುರಂದರವಿಠಲನು
ಘನ ಸಮರು ಇವಗಿಲ್ಲ ಜಗದೊಳು ಹನುಮ ಹೃತ್ಪದ್ಮವಾಸಿಗೆ ।।